ಶನಿವಾರ, ಜನವರಿ 2, 2016

ನೀ ಸಿಗದೇ ಬಾಳೊಂದು ಬಾಳೇ ಕೃಷ್ಣ

ನೀ ಸಿಗದೇ ಬಾಳೊಂದು ಬಾಳೇ ಕೃಷ್ಣ
ನಾ ತಾಳಲಾರೆ ಈ ವಿರಹ ಕೃಷ್ಣ

ಕಮಲವಿಲ್ಲದ ಕೆರೆ ನನ್ನ ಬಾಳು
ಚಂದ್ರ ಇಲ್ಲದಾ ರಾತ್ರಿ ಬೀಳು
ನೀ ಸಿಗದೇ ಉರಿ ಉರಿ ಕಳೆದೆ ಇರುಳ
ಮಾತೆಲ್ಲ ಬಿಗಿದಿದೆ ದುಃಖ ಕೊರಳ

ಅನ್ನ ಸೇರದು ನಿದ್ದೆ ಬಂದುದೆಂದು
ಕುದಿವೆ ಒಂದೇ ಸಮ ಕೃಷ್ಣ ಎಂದು
ಯಾರು ಅರಿವರು ಹೇಳು ನನ್ನ ನೋವ
ತಲ್ಲಣಿಸಿ ಕೂಗುತಿದೆ ದಾಸಿ ಜೀವ

ಒಳಗಿರುವ ಗಿರಿಧರನೇ ಹೊರಗೆ ಬಾರೋ
ಕಣ್ಣೆದುರು ನಿಂತು ಆ ರೂಪ ತೋರೋ
ಜನುಮ ಜನುಮದಾ ರಾಗ ನನ್ನ ಪ್ರೀತಿ
ನಿನ್ನೊಳಗೆ ಹರಿವುದೇ ಅದರಾ ರೀತಿ

ರಚನೆ: ಡಾ|| ಎನ್.ಎಸ್. ಲಕ್ಷ್ಮಿನಾರಾಯಣ ಭಟ್ಟ

ಸಂಗೀತ: ಮೈಸೂರು ಅನಂತಸ್ವಾಮಿ
ಗಾಯನ: ಎಂ ಡಿ ಪಲ್ಲವಿ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ